ಬೆಳಗಾವಿ: ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಆರಾಧ್ಯ ದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಧಾರ್ಮಿಕ ವಿಗ್ರಹಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ದೇವಸ್ಥಾನದಲ್ಲಿದ್ದ ಶಿವಲಿಂಗ, ನಂದಿ ಮೂರ್ತಿ, ಆಮೆ ಆಕಾರದ ರಚನೆ ಹಾಗೂ ಮುಂಭಾಗದ ಬೃಂದಾವನವನ್ನು ಧ್ವಂಸಗೊಳಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದ ಹೊರವಲಯದ ಬೆಟ್ಟದ ಮೇಲಿರುವ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ಧಾರ್ಮಿಕ ಮಹತ್ವದ ಜೊತೆಗೆ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ವಿವಿಧ ಹಿಂದೂ ಸಂಘಟನೆಗಳು ಕೃತ್ಯವನ್ನು ಖಂಡಿಸಿವೆ. ಈ ಸಂಬಂಧ ಗ್ರಾಮಸ್ಥರು ಖಾನಾಪುರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಿ ದೇವಸ್ಥಾನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

