Breaking News

ಕೆಎಸ್‌‍ಆರ್‌ಟಿಸಿ ಬಸ್ಸಿನಲ್ಲಿ ಅನುಮಾನಾಸ್ಪದವಾಗಿ ಮಡಿಕೇರಿಗೆ ತೆರಳುತ್ತಿದ್ದ 30 ಮಂದಿ ಮೂಲ ಪತ್ತೆ

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಮಡಿಕೇರಿಗೆ ತೆರಳುತ್ತಿದ್ದ ಸುಮಾರು 30 ಮಂದಿ ಬಾಂಗ್ಲಾದೇಶದವರು ಎಂಬ ಅನುಮಾನದಿಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಸ್‌ ತಡೆದು ಪ್ರತಿಭಟನೆ ನಡೆಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಯಾಣಿಕರನ್ನು ಪರಿಶೀಲಿಸಿದರು. ಪೊಲೀಸರ ವಿಚಾರಣೆಯಲ್ಲಿ ಬಹುತೇಕರು ಅಸ್ಸೋಂ ಮೂಲದವರಾಗಿದ್ದು, ಮಡಿಕೇರಿಯ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ತೆರಳುತ್ತಿದ್ದರು ಎಂಬುದು ತಿಳಿದುಬಂದಿದೆ. ತಂಡದಲ್ಲಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರ ಮೊಬೈಲ್‌ ಸಂಖ್ಯೆ ಹಾಗೂ ದಾಖಲೆಗಳನ್ನು ಪೊಲೀಸರು ಸಂಗ್ರಹಿಸಿ ಪರಿಶೀಲಿಸಿದ್ದು, ಯಾರೂ ಬಾಂಗ್ಲಾದೇಶದವರು ಅಲ್ಲ ಎಂಬುದು ದೃಢಪಟ್ಟಿದೆ. ಈ ಸಂಬಂಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *