Breaking News

ಮಾಜಿ ಉದ್ಯೋಗಿಗಳಿಂದಲೇ ಕಾರ್ಖಾನೆಗೆ ಕನ್ನ ಕೇಸ್, ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ದೊಡ್ಡಬಳ್ಳಾಪುರದ ಖಾಸಗಿ ಸಂಸ್ಥೆಯೊಂದರಲ್ಲಿ ಸುಮಾರು ₹2 ಕೋಟಿ ಮೌಲ್ಯದ ಕೈಗಾರಿಕಾ ಕಟಿಂಗ್ ಉಪಕರಣಗಳನ್ನು ಕದ್ದ ಆರೋಪದಡಿ ಐವರು ಮಾಜಿ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಮಶೇಖರ್, ಚಂದ್ರಶೇಖರ್, ಧನುಷ್, ನಾಗಭೂಷಣ್ ಹಾಗೂ ಹರೀಶ್ ಬಂಧಿತರು. ಆರೋಪಿಗಳು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲೇ ಹಂತ ಹಂತವಾಗಿ ಉಪಕರಣಗಳನ್ನು ಕದ್ದಿದ್ದರು ಎನ್ನಲಾಗಿದೆ. 2025ರ ವಾರ್ಷಿಕ ಸ್ಟಾಕ್ ಪರಿಶೀಲನೆ ವೇಳೆ ಭಾರಿ ಪ್ರಮಾಣದ ಸರಕು ವ್ಯತ್ಯಾಸ ಕಂಡುಬಂದ ಬಳಿಕ ಸಂಸ್ಥೆ ಪೊಲೀಸರಿಗೆ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರಿಂದ ₹80 ಲಕ್ಷ ಮೌಲ್ಯದ ಕಳುವಾದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *