ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ₹8.43 ಕೋಟಿ ಅಕ್ರಮ ವರ್ಗಾವಣೆಯಾಗಿರುವುದು ಆಡಿಟ್ ವೇಳೆ ಬಯಲಾಗಿದೆ. ಅಧ್ಯಕ್ಷರು ಹಾಗೂ ಸದಸ್ಯರಿಲ್ಲದ ಅವಧಿಯಲ್ಲಿ ಪ್ರಾಧಿಕಾರದ ಹೆಸರಿನಲ್ಲಿ ಅನಧಿಕೃತ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ವರ್ಗಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. 2022-23ರ ಅವಧಿಯಲ್ಲಿ ಹಾಗೂ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ಅಧ್ಯಕ್ಷರ ನೇಮಕವಾಗಿರಲಿಲ್ಲ. ಇದೇ ಸಮಯದಲ್ಲಿ ಕೊಪ್ಪಳದ ವಿವಿಧ ಬ್ಯಾಂಕ್ಗಳಲ್ಲಿ ನಕಲಿ ಖಾತೆಗಳನ್ನು ತೆರೆದು ₹8.43 ಕೋಟಿ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದ್ದು, ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ ಪ್ರಮುಖ ಆರೋಪಿಯಾಗಿದ್ದು, ಸದ್ಯ ಪರಾರಿಯಾಗಿದ್ದಾನೆ. ನಕಲಿ ಖಾತೆ ಸೃಷ್ಟಿ ಹಾಗೂ ಹಣ ವರ್ಗಾವಣೆಯಲ್ಲಿ ಇತರರ ಪಾತ್ರವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ರವೀಂದ್ರ ಕುಮಾರ್ ಬಂಧನಕ್ಕೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

