ಬೆಂಗಳೂರು: ಕರ್ತವ್ಯನಿರತ ಸಂಚಾರ ಪೊಲೀಸ್ ಸಿಬ್ಬಂದಿಯೊಂದಿಗೆ ಗಲಾಟೆ ನಡೆಸಿ ಹಲ್ಲೆಗೆ ಯತ್ನಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜುಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹುಳಿಮಾವು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಅರುಣ್, ಮಂಜು ಅವರ ಕಾರನ್ನು ತಡೆದಿದ್ದರು. ಇದನ್ನು ಪ್ರಶ್ನಿಸಿದ ಮಂಜು ವಾಗ್ವಾದಕ್ಕಿಳಿದು, ಸಿಬ್ಬಂದಿಯ ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಘಟನೆಯ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ಮಂಜುನಾಥ್ ಅವರನ್ನು ಖಾಸಗಿ ಹೋಟೆಲ್ನಲ್ಲಿ ಬಂಧಿಸಿದ್ದರು. ಬಳಿಕ ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಲಾಗಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

