Breaking News

ಉಡುಪಿ: ಡೇವಿಡ್ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಆರೋಪಿಯೊಬ್ಬ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಮುಂಬೈ ಗ್ಯಾಂಗ್‌ಸ್ಟರ್ ಹಾಗೂ ಬಿಹಾರದ ಅನುಜ್ ಪಾಟೀಲ್ (35) ಗುಂಡೇಟಿಗೆ ಒಳಗಾದ ಆರೋಪಿ. ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಕರೆತರುತ್ತಿದ್ದ ವೇಳೆ ಅನುಜ್, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೊಲ್ಲೂರು ಠಾಣೆ ಪಿಎಸ್‌ಐ ವಿನಯ್ ಅವರ ಆಯುಧ ಕಸಿದು ಗುಂಡು ಹಾರಿಸಿದ್ದಾನೆ ಎಂದು ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಕುಂದಾಪುರ ಎಸ್‌ಐ ನಂಜ ನಾಯಕ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಡೇವಿಡ್ ಹತ್ಯೆಗೆ ಅನುಜ್ ಶೂಟರ್‌ಗಳನ್ನು ಕಳುಹಿಸಿದ್ದ ಎನ್ನಲಾಗಿದ್ದು, 2017ರಿಂದ ತಲೆಮರೆಸಿಕೊಂಡಿದ್ದ. ಮಹಾರಾಷ್ಟ್ರದಲ್ಲಿ ಆತನ ವಿರುದ್ಧ ಮೋಕಾ ಕಾಯ್ದೆಯಡಿ ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಿವೆ. ಗಾಯಗೊಂಡ ಅನುಜ್‌ನನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *