ಬಳ್ಳಾರಿ: ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಮಹೇಂದ್ರ ಜೀತೋ ಗೂಡ್ಸ್ ವಾಹನ ಅಪಘಾತಕ್ಕೀಡಾದ ಘಟನೆ ಬಳ್ಳಾರಿ ತಾಲೂಕಿನ ಚರಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-67ರಲ್ಲಿ ನಡೆದಿದೆ. ಆಂಧ್ರಪ್ರದೇಶದಿಂದ ಭತ್ತದ ಸಸಿ ನಾಟಿ ಕೆಲಸಕ್ಕೆ ಬಂದಿದ್ದ 26ಕ್ಕೂ ಹೆಚ್ಚು ಕೃಷಿ ಕಾರ್ಮಿಕರು ವಾಹನದಲ್ಲಿದ್ದರು. ಅಪಘಾತದಲ್ಲಿ 15ರಿಂದ 20 ಮಂದಿ ಗಾಯಗೊಂಡಿದ್ದು, ನಾಲ್ಕೈದು ಮಂದಿಗೆ ಮೂಳೆ ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಎರಡು ಆಂಬುಲೆನ್ಸ್ಗಳ ಮೂಲಕ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಗ್ರಾಮೀಣ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

