ಉಡುಪಿ: ಮಲ್ಪೆ ಬಂದರಿನಲ್ಲಿ ಕುಡಿದ ಮತ್ತಿನಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮೀನುಗಾರಿಕಾ ಬೋಟ್ ಕಾರ್ಮಿಕನೊಬ್ಬ ಚೂರಿ ಇರಿತಕ್ಕೆ ಬಲಿಯಾಗಿದ್ದಾನೆ. ಚಿಕ್ಕಮಗಳೂರು ಮೂಲದ 24 ವರ್ಷದ ಅಭಿಷೇಕ್ ಮೃತಪಟ್ಟ ಯುವಕ. ‘ಶ್ರೀ ಮಹಾಕಾಳಿ’ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ಗೆ ರಾಯಚೂರು ಮೂಲದ ಗೋವಿಂದ ರಾಜು ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಮೃತಪಟ್ಟಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಘಟನೆ ಬಳಿಕ ಕಾರ್ಯಾಚರಣೆ ನಡೆಸಿದ ಮಲ್ಪೆ ಪೊಲೀಸರು ಗೋವಿಂದ ರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಡಿದ ಮತ್ತಿನಲ್ಲೇ ಕೊಲೆ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

