Breaking News

ಕುಡಿದ ಮತ್ತಿನಲ್ಲಿ ಕಿರಿಕ್ – ಚೂರಿ ಇರಿದು ಪರಾರಿಯಾಗಿದ್ದವನ ಕ್ಷಿಪ್ರ ಬಂಧನ!

ಉಡುಪಿ: ಮಲ್ಪೆ ಬಂದರಿನಲ್ಲಿ ಕುಡಿದ ಮತ್ತಿನಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮೀನುಗಾರಿಕಾ ಬೋಟ್ ಕಾರ್ಮಿಕನೊಬ್ಬ ಚೂರಿ ಇರಿತಕ್ಕೆ ಬಲಿಯಾಗಿದ್ದಾನೆ. ಚಿಕ್ಕಮಗಳೂರು ಮೂಲದ 24 ವರ್ಷದ ಅಭಿಷೇಕ್ ಮೃತಪಟ್ಟ ಯುವಕ. ‘ಶ್ರೀ ಮಹಾಕಾಳಿ’ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್‌ಗೆ ರಾಯಚೂರು ಮೂಲದ ಗೋವಿಂದ ರಾಜು ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಮೃತಪಟ್ಟಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಘಟನೆ ಬಳಿಕ ಕಾರ್ಯಾಚರಣೆ ನಡೆಸಿದ ಮಲ್ಪೆ ಪೊಲೀಸರು ಗೋವಿಂದ ರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಡಿದ ಮತ್ತಿನಲ್ಲೇ ಕೊಲೆ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *