ಬೆಂಗಳೂರು: ಯಲಹಂಕದ ಕಟ್ಟಿಗೆನಹಳ್ಳಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿ ಚಂದ್ರಮೌಳಿ ಮನೆಯಲ್ಲಿ ಸುಮಾರು 1 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳಿ ಗ್ಯಾಂಗ್ನ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಧೀರೇಂದ್ರ ಪ್ರೇಮ್, ಅಭಿಷೇಕ್, ಅಂಬರೆ ಧಮೈ ಹಾಗೂ ದೀಪಕ್ ಶಾಹಿ ಬಂಧಿತರು. ಮನೆಯಲ್ಲೇ ಕೆಲಸ ಮಾಡುತ್ತಿದ್ದ ಸಂಜಯ್ ಹಾಗೂ ಆತನ ಪತ್ನಿ 6 ತಿಂಗಳಿಂದ ಕಳ್ಳತನಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಆಗಸ್ಟ್ 16ರಂದು ಕುಟುಂಬಸ್ಥರು ತಿಥಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಚಿನ್ನ ಕದ್ದು, ದಂಪತಿ ವಿಮಾನದಲ್ಲಿ ಪರಾರಿಯಾಗಿದ್ದರು. ಫೇಸ್ಬುಕ್ ಮೂಲಕ ಆರೋಪಿಗಳ ಸುಳಿವು ಪತ್ತೆಹಚ್ಚಿದ ಪೊಲೀಸರು ಎಸ್ಎಸ್ಬಿಗೆ ಮಾಹಿತಿ ನೀಡಿದ್ದರು. ನೇಪಾಳ ಗಡಿಯಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ₹55 ಲಕ್ಷ ಮೌಲ್ಯದ 360 ಗ್ರಾಂ ಚಿನ್ನ ಹಾಗೂ 960 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ಆರೋಪಿ ಸಂಜಯ್ ಹಾಗೂ ಆತನ ಪತ್ನಿಗಾಗಿ ಶೋಧ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

