Breaking News

ಮೆರವಣಿಗೆ ವೇಳೆ ಸಚಿವ ಅಜಯ್ ಸಿಂಗ್​​​ಗೆ ಶಾಕ್​ ಕೊಟ್ಟ ಕಳ್ಳ!

ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ನಡೆದ ಮೆರವಣಿಗೆ ವೇಳೆ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಅವರ ಕೈಯಲ್ಲಿದ್ದ ಉಂಗುರ ಕದಿಯಲು ಕಳ್ಳರು ಯತ್ನಿಸಿದ ಘಟನೆ ನಡೆದಿದೆ. ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರಕ್ಕೆ ಆಗಮಿಸಿದ್ದ ಅಜಯ್ ಸಿಂಗ್ ಅವರನ್ನು ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿ, ಹೆಗಲ ಮೇಲೆ ಹೊತ್ತು ಮೆರವಣಿಗೆ ನಡೆಸಿದರು. ಈ ವೇಳೆ ಜನದಟ್ಟಣೆಯ ನಡುವೆ ದುಷ್ಕರ್ಮಿಯೊಬ್ಬರು ಉಂಗುರ ಕದಿಯಲು ಯತ್ನಿಸಿದ್ದಾನೆ. ಇದರಿಂದ ಬೆಚ್ಚಿಬಿದ್ದ ಸಚಿವರು ಕೂಡಲೇ ಕೈಯನ್ನು ಹಿಂದಕ್ಕೆ ಎತ್ತಿಕೊಂಡಿದ್ದಾರೆ. ಘಟನೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *