ವಿಜಯಪುರ ನಗರದ ಹೊರವಲಯದ ಐತಿಹಾಸಿಕ ಬೂತನಾಳ ಕೆರೆಯಲ್ಲಿ ನಾಲ್ಕು ಮಹಿಳೆಯರು ಹಾಗೂ ಇಬ್ಬರು ಬಾಲಕರ ಸೇರಿದಂತೆ ಒಟ್ಟು ಆರು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆರೆಯಲ್ಲಿ ಇನ್ನಷ್ಟು ಶವಗಳು ಇರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆಯುತ್ತಿದ್ದಾರೆ. ಕೆರೆಗೆ ಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದ್ದು, ಆದರ್ಶ ನಗರ ಠಾಣೆ ಪಿಎಸ್ಐ ಸೀತಾರಾಮ್, ಹಿರಿಯ ಅಧಿಕಾರಿ ನಾಗರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

