Breaking News

ಕದ್ದ ಹಣವನ್ನು ಬಡವರಿಗೆ ದಾನ ಮಾಡುತ್ತಿದ್ದ ರಾಬಿನ್ ಹುಡ್ ಅರೆಸ್ಟ್ – ಭಾರೀ ಮೌಲ್ಯದ ಚಿನ್ನ ಜಪ್ತಿ!

ಬೆಂಗಳೂರು: ಮನೆಗಳಿಗೆ ಕನ್ನ ಹಾಕಿ ಕದ್ದ ಆಭರಣಗಳನ್ನು ಮಾರಾಟ ಮಾಡಿ ಬಂದ ಹಣದ ಅರ್ಧ ಭಾಗವನ್ನು ಬಡವರಿಗೆ ದಾನ ಮಾಡುತ್ತಿದ್ದ ಸೀಗೆಹಳ್ಳಿ ನಿವಾಸಿ ಶಿವರಸನ್ ಅಲಿಯಾಸ್ ಶಿವು (33)ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಆತನಿಂದ 8 ಮನೆಕಳವು ಪ್ರಕರಣಗಳನ್ನು ಭೇದಿಸಿ ₹26 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಚಿತ್ರಕಲಾವಿದ ಎಂದು ಹೇಳಿಕೊಳ್ಳುವ ಶಿವರಸನ್, 2018ರಿಂದ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ. ಈ ಹಿಂದೆ 13 ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದರೂ ಮತ್ತೆ ತನ್ನ ಹಳೆಯ ಕಸುಬನ್ನು ಮುಂದುವರಿಸಿದ್ದ. ಇತ್ತೀಚೆಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಕದ್ದ ಹಣದಿಂದ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತೇನೆ ಹಾಗೂ ಬಡವರಿಗೆ ದಾನ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಅಪರಾಧ ಕೃತ್ಯವೆಸಗಿ ಗಳಿಸಿದ ಹಣವನ್ನು ದಾನ ಮಾಡುವುದರಿಂದ ಆತನ ಕೃತ್ಯ ಸಮರ್ಥನೆಯಾಗುವುದಿಲ್ಲ ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಕದ್ದ ಹಣದಿಂದ ದಾನ-ಧರ್ಮ ಮಾಡಿದರೂ ಕಳ್ಳತನ ಅಪರಾಧವೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *