Breaking News

ಈದ್‌ ಮೆರವಣಿಗೆ ವೇಳೆ ಹಿಂದೂ ಯುವಕನ ಮೇಲೆ ಹಲ್ಲೆ : 3 ಆರೋಪಿಗಳ ಬಂಧನ

ಬೆಂಗಳೂರು ಬಸವನಗುಡಿಯ ಕೆಆರ್‌ ರಸ್ತೆಯಲ್ಲಿ ಈದ್‌-ಮಿಲಾದ್‌ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮುರಳಿ ಎಂಬ ಯುವಕನ ಮೇಲೆ ಆಯುಧದಿಂದ ಹಲ್ಲೆ ಮಾಡಲಾಗಿದೆ. ಗಾಯಗೊಂಡಿರುವ ಮುರಳಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ ದಾಖಲಾಗಿದ್ದು, ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ್‌ ಕೆರೆಹಳ್ಳಿ, ಗೋಪಿಗೌಡ ಹಾಗೂ ವಿನೋದ್‌ ನಾಯಕ್‌ ಮತ್ತು ಅಕಲ್‌ ಪಾಷಾ, ಅಬೂಬಕರ್‌ ಸಿದ್ಧಿಕ್‌, ಸೈಯ್ಯದ್‌ ಅನಸ್‌ ಬಂಧಿತರು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿ ಅಥವಾ ಪ್ರಚೋದನಕಾರಿ ಚಟುವಟಿಕೆಗಳಿಗೆ ಒಳಗಾಗದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಡಿಸಿಪಿ ವಂಶಿಕೃಷ್ಣ ಮನವಿ ಮಾಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *