Breaking News

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೋಟ್ಯಂತರ ರೂ. ಹಗರಣ : ‘ವಾರ್ತಾಭಾರತಿ’ ವರದಿಯ ಬೆನ್ನಲ್ಲೇ ಪ್ರಮುಖ ಆರೋಪಿ ರವಿಂದ್ರಕುಮಾರ ಬಂಧನ

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರವೀಂದ್ರಕುಮಾರ ಬೇವಿನಾಳ, ಅವರ ಪತ್ನಿ ರಮಾ ಹಾಗೂ ಸಹೋದರ ಅನಿಲ್‌ಕುಮಾರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿವೇಶನ ನೀಡುವುದಾಗಿ ಹೇಳಿ, ಆಯುಕ್ತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡ ಆರೋಪ ಇವರ ಮೇಲಿದೆ. ರವೀಂದ್ರಕುಮಾರ ಪ್ರಾಧಿಕಾರದಲ್ಲಿ ದಿನಗೂಲಿ ಲೆಕ್ಕಾಧಿಕಾರಿಯಾಗಿ ಹಾಗೂ ಇಎಸ್‌ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ ಹಣ ದುರ್ಬಳಕೆ ಹಾಗೂ ಅಂದಿನ ಆಯುಕ್ತರ ಸಹಿ ನಕಲು ಮಾಡಿದ ಆರೋಪವೂ ಅವರ ಮೇಲಿದೆ. ಈ ಅಕ್ರಮದ ಕುರಿತು ‘ವಾರ್ತಾಭಾರತಿ’ ಜುಲೈ 24ರಂದು ವರದಿ ಪ್ರಕಟಿಸಿದ ಬಳಿಕ ತನಿಖೆ ಚುರುಕುಗೊಂಡಿತ್ತು. ಆರಂಭದಲ್ಲಿ ಲಕ್ಷಾಂತರ ರೂಪಾಯಿ ಎಂದು ಅಂದಾಜಿಸಿದ್ದ ಅವ್ಯವಹಾರ ಕೋಟ್ಯಂತರ ರೂಪಾಯಿಗೆ ವಿಸ್ತರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *