ಮೈಸೂರು: ಪೊಲೀಸರು ಎಂದು ಹೇಳಿಕೊಂಡು ಮನೆಗೆ ನುಗ್ಗಿದ ಐವರು ದುಷ್ಕರ್ಮಿಗಳು, ಮಹಿಳೆಯರಿಗೆ ಬೆದರಿಕೆ ಹಾಕಿ ಮೂರು ಮೊಬೈಲ್ಗಳನ್ನು ಕಸಿದು ಪರಾರಿಯಾಗಿರುವ ಘಟನೆ ಶಾರದಾದೇವಿನಗರದಲ್ಲಿ ನಡೆದಿದೆ. ಆಗಸ್ಟ್ 25ರಂದು ಸವಿತಾ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಸವಿತಾ ಅವರು ಸ್ನೇಹಿತೆಯರಾದ ಕೆಂಡಮ್ಮ ಹಾಗೂ ಸರಸ್ವತಿ ಜೊತೆ ಮನೆಯಲ್ಲಿದ್ದಾಗ ಮುಖಕ್ಕೆ ಮಾಸ್ಕ್ ಧರಿಸಿದ್ದ ಐವರು ಏಕಾಏಕಿ ಒಳನುಗ್ಗಿದ್ದಾರೆ. ತಾವು ಸರಸ್ವತಿಪುರಂ ಠಾಣೆಯ ಪೊಲೀಸರು ಎಂದು ಹೇಳಿ, ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಬೆದರಿಸಿ ₹2 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಲು ಸಾಧ್ಯವಿಲ್ಲ ಎಂದು ಸವಿತಾ ಹೇಳಿದಾಗ, ಮೂವರು ಮಹಿಳೆಯರ ಬಳಿಯಿದ್ದ ಮೂರು ಮೊಬೈಲ್ಗಳನ್ನು ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

