Breaking News

ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ​​​, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಬೆಳಗಾವಿ: ಪ್ರೀತಿ ನಿರಾಕರಿಸಿದ್ದಕ್ಕೆ 16 ವರ್ಷದ ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2021ರ ಆಗಸ್ಟ್ 1ರಂದು ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಜಾತ್ರೆಗೆ ತೆರಳಿದ್ದ ಬಾಲಕಿಯನ್ನು ಅಮೀರ್ ಲಾಲ್‌ಸಾಬ್ ಜಮಾದಾರ್ ಹಿಂಬಾಲಿಸಿ ಪ್ರೀತಿಸುವಂತೆ ಒತ್ತಾಯಿಸಿದ್ದ. ಬಾಲಕಿ ನಿರಾಕರಿಸಿ ಪೋಷಕರಿಗೆ ತಿಳಿಸುವುದಾಗಿ ಹೇಳಿದ್ದಕ್ಕೆ ಕೋಪಗೊಂಡ ಆರೋಪಿ, ಮಟನ್ ಕತ್ತರಿಸುವ ಚಾಕುವಿನಿಂದ ಎದೆ, ಬೆನ್ನು ಹಾಗೂ ಕೈಗೆ ಇರಿದು ಕೊಲೆ ಮಾಡಿದ್ದ. ಬಳಿಕ ಆತ್ಮಹತ್ಯೆಗೆ ಯತ್ನಿಸಿ ವಿಫಲನಾಗಿದ್ದ ಆತನನ್ನು ಪೊಲೀಸರು ಮರುದಿನ ಬಂಧಿಸಿದ್ದರು. ಪ್ರಕರಣದ ಸಾಕ್ಷ್ಯಗಳನ್ನು ಪರಿಗಣಿಸಿದ ನ್ಯಾಯಾಧೀಶ ವಿಜಯಕುಮಾರ್ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಿದ್ದಾರೆ. ತೀರ್ಪಿನಿಂದ ಮೃತ ಬಾಲಕಿಯ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *