ಶಿವಮೊಗ್ಗದ ವೆಂಕಟೇಶನಗರದ 5ನೇ ಕ್ರಾಸ್ನಲ್ಲಿ ಭಗ್ನಪ್ರೇಮಿಯೊಬ್ಬ ಎರಡು ಬೈಕ್ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಣಿ ಎಂಬ ಯುವಕ ಈ ಕೃತ್ಯ ಎಸಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ದುಶ್ಚಟಗಳಿಗೆ ದಾಸನಾಗಿದ್ದ ಕಾರಣ ಯುವತಿ ಆತನನ್ನು ನಿರ್ಲಕ್ಷಿಸಿದ್ದಳು. ಇತ್ತೀಚೆಗೆ ಯುವತಿಗೆ ಅಂಥೋಣಿದಾಸ್ ಎಂಬಾತನೊಂದಿಗೆ ನಿಶ್ಚಿತಾರ್ಥವಾಗಿದ್ದರಿಂದ ಕೋಪಗೊಂಡ ಮಣಿ, ಅಂಥೋಣಿದಾಸ್ ಹಾಗೂ ಯುವತಿಯ ಸಹೋದರನ ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾನೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸರು ಆರೋಪಿ ಮಣಿಯನ್ನು ಬಂಧಿಸಿದ್ದಾರೆ. ಬೈಕ್ಗಳಿಗೆ ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

