ಗಂಗಾವತಿಯಲ್ಲಿ ಪ್ರೇಯಸಿಯನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದು ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಹಣವಾಳ ಗ್ರಾಮದ ರಾಜಾ ಎಂಬ ಯುವಕ ಟವರ್ ಏರಿ ಎರಡು ಗಂಟೆಗೂ ಹೆಚ್ಚು ಕಾಲ ಆತಂಕ ಸೃಷ್ಟಿಸಿದ್ದಾನೆ. ದೇವದುರ್ಗ ಮೂಲದ ಯುವತಿಯನ್ನು ಪ್ರೀತಿಸುತ್ತಿರುವ ರಾಜಾ, ಆಕೆಯನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದಿದ್ದ. ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಸಾರ್ವಜನಿಕರು ಮನವೊಲಿಸಲು ಪ್ರಯತ್ನಿಸಿದರೂ ಆತ ಕೆಳಗಿಳಿಯದೆ ಟವರ್ನ ತುದಿಯಲ್ಲಿ ನಿಂತು, ಕುಳಿತು ಆತಂಕ ಮೂಡಿಸಿದ್ದಾನೆ. ನಿರಂತರ ಪ್ರಯತ್ನದ ಬಳಿಕ ಪೊಲೀಸರು ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದೇ ಯುವಕ ಭಾನುವಾರ ದೇವದುರ್ಗದಲ್ಲೂ ಮೊಬೈಲ್ ಟವರ್ ಏರಿ ಹೈಡ್ರಾಮಾ ಮಾಡಿದ್ದ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

