Breaking News

ಚೆನ್ನಾಗಿ ಓದುವಂತೆ ಪೋಷಕರು ಬುದ್ಧಿ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗದಲ್ಲಿ ಚೆನ್ನಾಗಿ ಓದುವಂತೆ ಪೋಷಕರು ನೀಡಿದ ಸಲಹೆಗೆ ಮನನೊಂದ 14 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಖಾಸಗಿ ವಿದ್ಯಾಸಂಸ್ಥೆಯಲ್ಲಿ 9ನೇ ತರಗತಿ ಓದುತ್ತಿದ್ದ ಸೃಷ್ಟಿ ಮೃತ ಬಾಲಕಿ. ತಂದೆ-ತಾಯಿ ದೇವಸ್ಥಾನದ ಪೂಜೆಗೆ ತೆರಳಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಪೂಜೆ ಮುಗಿಸಿ ಪೋಷಕರು ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಓದಿನ ಬಗ್ಗೆ ಪದೇಪದೇ ಒತ್ತಡ ನೀಡುತ್ತಿದ್ದ ಕಾರಣ ಈ ಹೆಜ್ಜೆ ಇಟ್ಟಿರುವುದಾಗಿ ಡೆತ್‌ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಕ್ಕಳ ಮೇಲೆ ವಿದ್ಯಾಭ್ಯಾಸದ ವಿಚಾರದಲ್ಲಿ ಅತಿಯಾದ ಒತ್ತಡ ಹೇರದಂತೆ ಈ ಘಟನೆ ಎಚ್ಚರಿಕೆ ನೀಡಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *