Breaking News

ಬೆಳ್ತಂಗಡಿ | ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿಯಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

ವರ್ಗಾವಣೆ ಡೀಲಿಂಗ್ ಹಾಗೂ ತಿಂಗಳ ಮಾಮೂಲಿ ವಿಚಾರದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಬೆಳ್ತಂಗಡಿ ಎಸ್‌ಐಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ವಿನೋದ್ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡದ ಹಳಿಯಾಳ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ವಿನೋದ್ ರೆಡ್ಡಿ ಬಳಿಕ ಮುಂಡಗೋಡ ಠಾಣೆಗೆ ವರ್ಗಾವಣೆಯಾಗಿದ್ದರು. ಆದರೆ ವಿಶೇಷ ತನಿಖಾ ದಳ ರಚನೆಯಾದ ಬಳಿಕ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ಎಸ್‌ಐಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ದೀಪನ್ ಎಂ.ಎನ್. ಅವರು ಪಿಎಸ್‌ಐಗಳಾದ ಕಿರಣ್ ಪಾಟೀಲ್, ಕೃಷ್ಟಾ ಅರಿಕೆರೆ ಹಾಗೂ ವಿನೋದ್ ರೆಡ್ಡಿ ಸೇರಿದಂತೆ ಮೂವರನ್ನು ಪ್ರಾಥಮಿಕ ತನಿಖೆ ಬಳಿಕ ಆಗಸ್ಟ್ 31ರಂದು ಅಮಾನತು ಮಾಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *