ಕಲಬುರಗಿ: ರೂಢಿಗತ ಕಳ್ಳನ ಕುಟುಂಬಕ್ಕೆ ಗಡೀಪಾರು ಮಾಡುವುದಾಗಿ ಬೆದರಿಸಿ ₹20 ಸಾವಿರ ಲಂಚ ಪಡೆಯುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ ಪರಶುರಾಮ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮತ್ತೊಬ್ಬ ಕಾನ್ಸ್ಟೆಬಲ್ ವೀರೇಶ ಪರಾರಿಯಾಗಿದ್ದಾನೆ. ಬ್ರಹ್ಮಪುರ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಂಒಬಿ ಶೀಟ್ ಹೊಂದಿರುವ ಕಾರ್ತಿಕ್ ಪಾಟೀಲನ ಕುಟುಂಬಕ್ಕೆ ₹1 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈಗಾಗಲೇ ₹50 ಸಾವಿರ ಪಡೆದಿದ್ದ ಕಾನ್ಸ್ಟೆಬಲ್ಗಳು ಮತ್ತೆ ₹20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಕಾರ್ತಿಕ್ ತಂದೆ ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಬಸವರಾಜ ಎಲಿಗಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

