ಉಪ್ಪಿನಂಗಡಿ: ಕಡವಿನಬಾಗಿಲು ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಡವಿನಬಾಗಿಲು ನಿವಾಸಿ ಮೊಹಮ್ಮದ್ ಝಿಯಾದ್ (24) ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಕುವೆಟ್ಟು ಗ್ರಾಮದ ಮಹಮ್ಮದ್ ನೌಶಾದ್ ಎಂಬಾತನಿಂದ ಗಾಂಜಾವನ್ನು ಖರೀದಿಸಿರುವುದಾಗಿ ಆತ ತಿಳಿಸಿದ್ದರಿಂದ ಆತನನ್ನು ಶೋಧನೆಗೆ ಒಳಪಡಿಸಿದಾಗ ಆತನಲ್ಲಿ ಗಾಂಜಾ ಪತ್ತೆಯಾಗಿದೆ. ಈ ಕಾರಣಕ್ಕೆ ಗಾಂಜಾ ಸೇವನೆ, ಸಾಗಣೆ ಮತ್ತು ಮಾರಾಟ ಆರೋಪದಡಿ ಇಬ್ಬರ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

