Breaking News

₹2.5 ಲಕ್ಷ ಸಾಲಕ್ಕೆ ಸಿವಿಲ್ಸ್ ವಿದ್ಯಾರ್ಥಿ ಬಲಿ; 19 ಮಂದಿಯ ಹೆಸರು ಬರೆದಿಟ್ಟು ಆತ್ಮಹತ್ಯೆ

ಪುಣೆಯ ಶನಿವಾರ ಪೇಠ್ ಪ್ರದೇಶದಲ್ಲಿ ₹2.5 ಲಕ್ಷ ಸಾಲ ತೀರಿಸಲಾಗದೆ ಸಿವಿಲ್ ಸರ್ವಿಸಸ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 28 ವರ್ಷದ ಪ್ರಥಮೇಶ್ ದೇಶಮುಖ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಸಾಲದ ವಿವರ ಹಾಗೂ 19 ಮಂದಿಯ ಹೆಸರುಗಳಿದ್ದ ಎರಡು ಪುಟಗಳ ಪತ್ರ ಪತ್ತೆಯಾಗಿದೆ. ಧಾರಾಶಿವ್ ಜಿಲ್ಲೆಯ ಪ್ರಥಮೇಶ್, ಕಳೆದ 8 ತಿಂಗಳಿಂದ ಪುಣೆಯಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ವಾಸಿಸುತ್ತಿದ್ದು MPSC ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಸಾಲ ಮಾಡಿದ್ದೇಕೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. MPSC ಪರೀಕ್ಷೆಗಳಲ್ಲಿನ ವಿಳಂಬ, ಅಕ್ರಮ ಮತ್ತು ಅನಿಶ್ಚಿತತೆಯ ವಿರುದ್ಧ ಅಭ್ಯರ್ಥಿಗಳ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲೇ ಘಟನೆ ನಡೆದಿದೆ. ವಿದ್ಯಾರ್ಥಿಗಳ ಮೇಲಿನ ಒತ್ತಡಕ್ಕೆ ಸರ್ಕಾರ ಹೊಣೆಗಾರಿಕೆ ವಹಿಸಬೇಕು ಎಂದು ಸಿಜೆಪಿ ಆಗ್ರಹಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *