ಚಿತ್ರದುರ್ಗ: ಹಸು ಮೇಯಿಸುತ್ತಿದ್ದ ಮಹಿಳೆ ಮೇಲೆ ಅಸಭ್ಯವಾಗಿ ವರ್ತಿಸಿದ ಅಪ್ರಾಪ್ತ ಬಾಲಕನನ್ನು ಮಹಿಳೆ ವಿರೋಧಿಸಿದ್ದಕ್ಕೆ, ವಿಷಯ ಬಹಿರಂಗವಾಗುವ ಭಯದಲ್ಲಿ ಆಕೆಯನ್ನು ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪದಡಿ ನಾಲ್ವರನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆದಿವಾಲ ಭೋವಿ ಕಾಲೋನಿ ಗ್ರಾಮದ ಗಂಗಮ್ಮ ಸೆ.6ರಂದು ಹಸು ಮೇಯಿಸುತ್ತಿದ್ದ ವೇಳೆ ಅಪ್ರಾಪ್ತ ಬಾಲಕ ಬಲವಂತವಾಗಿ ಹಿಡಿದುಕೊಳ್ಳಲು ಯತ್ನಿಸಿದ್ದಾನೆ. ಇದನ್ನು ವಿರೋಧಿಸಿ ಗಂಗಮ್ಮ ಕೂಗಿಕೊಂಡಾಗ, ಬಾಲಕನ ತಂದೆ ಲವ ಹಾಗೂ ಚಿಕ್ಕಪ್ಪಂದಿರಾದ ಕುಶ, ತಿಪ್ಪೇಸ್ವಾಮಿ ಸ್ಥಳಕ್ಕೆ ಬಂದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಗಂಗಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಲವ, ಕುಶ, ತಿಪ್ಪೇಸ್ವಾಮಿ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

