ತಾವರೆಕೆರೆ ನಕಲಿ ಮೆಡಿಸಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಎಸ್ಐಟಿ ಹಾಗೂ ಡ್ರಗ್ಸ್ ಕಂಟ್ರೋಲ್ ಇಲಾಖೆ ಅಧಿಕಾರಿಗಳು ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಕಡೆ ಹಾಗೂ ಹರಿಯಾಣ, ಹಿಮಾಚಲ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಕಲಿ ಔಷಧಿ ಸರಬರಾಜು ಮಾಡುತ್ತಿದ್ದ ಫಾರ್ಮ್ಗಳು ಮತ್ತು ಕಂಪನಿಗಳ ಮೇಲೆ ಶೋಧ ನಡೆಸಲಾಗಿದೆ. ನಕಲಿ ಬಾಟಲ್, ಲೇಬಲ್ ಬಳಸಿ ಔಷಧಿ ತಯಾರಿಸಿ ಸರಬರಾಜು ಮಾಡುತ್ತಿದ್ದ ಜಾಲದ ಬಗ್ಗೆ ತನಿಖೆ ಮುಂದುವರಿದಿದ್ದು, ಕಿಂಗ್ಪಿನ್ ಪ್ರಶಾಂತ್ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಕೃಪಾ ಫಾರ್ಮ್ ಮಾಲೀಕ ವೀರೇಶ್ ಮನೆ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಖಲೆಗಳಿಗಾಗಿ ಪರಿಶೀಲನೆ ನಡೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

