Breaking News

ಗಣೇಶಮೂರ್ತಿ ಆಗಮನ ಮೆರವಣಿಗೆ ವೇಳೆ ಕಿಡಿಗೇಡಿಗಳ ಕಿರುಕುಳ: ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿ: ಗಣೇಶಮೂರ್ತಿ ಆಗಮನದ ಮೆರವಣಿಗೆ ವೇಳೆ ಕೆಲ ಕಿಡಿಗೇಡಿ ಯುವಕರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಎರಡು ಗಣಪತಿ ಉತ್ಸವ ಸಮಿತಿಗಳು ಮುಖಾಮುಖಿಯಾದ ವೇಳೆ ಘಟನೆ ನಡೆದಿದೆ. ಯುವಕರನ್ನು ತಡೆಯಲು ಸಾರ್ವಜನಿಕರು ಮುಂದಾದಾಗ ಗಲಾಟೆ ಉಂಟಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಕಿಡಿಗೇಡಿಗಳನ್ನು ಚದುರಿಸಲಾಗಿದೆ. ಮಹಿಳೆಯರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಹಬ್ಬದ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *