Breaking News

‘ಮುಂದಿನ ಜನ್ಮದಲ್ಲಿ ನಿನ್ನವನಾಗಿ ಹುಟ್ಟಿ ಬರುವೆ’, ಮದುವೆಯಾದ ಕೆಲ ದಿನಗಳಲ್ಲೇ ಯುವಕನ ದುರಂತ ಅಂತ್ಯ

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ಪತ್ನಿಯನ್ನು ಪೋಷಕರು ಬಲವಂತವಾಗಿ ಕರೆದೊಯ್ದಿದ್ದರಿಂದ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ದೇವದಾರ್ ಏರಿಯಾದಲ್ಲಿ ನಡೆದಿದೆ. ಮಂಜುನಾಥ್ ಅಗಡಿ (24) ಮೃತ ಯುವಕ. ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಮಂಜುನಾಥ್, ಇತ್ತೀಚೆಗೆ ಸ್ಥಳೀಯ ದೇವಸ್ಥಾನವೊಂದರಲ್ಲಿ ಗುಟ್ಟಾಗಿ ಮದುವೆಯಾಗಿದ್ದ. ಆದರೆ ಯುವತಿ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿ, ಮಹಿಳಾ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಪೊಲೀಸ್ ಠಾಣೆಯಲ್ಲಿ ವಿಚಾರಣೆ ಬಳಿಕ ಯುವತಿಯ ಪೋಷಕರು ಆಕೆಯನ್ನು ಮನೆಗೆ ಕರೆದೊಯ್ದಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಮಂಜುನಾಥ್, ‘ಮುಂದಿನ ಜನ್ಮ ಅಂತಿದ್ರೆ ನಾನು ನಿನ್ನವನಾಗಿ ಹುಟ್ಟಿ ಬರುವೆ’ ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *