Breaking News

ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್, ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ!

ಮೈಸೂರು: ಇ-ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ ₹50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಲಯ ಕಚೇರಿ-2ರ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಡಿ.ಎಂ. ಮಂಜುನಾಥ್ ಅಮಾನತುಗೊಂಡಿದ್ದಾರೆ. ಗೂಗಲ್ ಪೇ ಮೂಲಕ ಹಣ ಪಡೆದಿದ್ದು, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ವಾರ್ಡ್‌ 62ರ ನಿವಾಸಿ ಪವಿತ್ರ ಇ-ಖಾತೆಗಾಗಿ ಅರ್ಜಿ ಸಲ್ಲಿಸಿದ್ದರು. ಎರಡು ತಿಂಗಳಾದರೂ ಖಾತೆ ಮಾಡಿಕೊಡದೆ ಸತಾಯಿಸಿದ್ದ ಮಂಜುನಾಥ್, ವಕೀಲ ಲೋಕೇಶ್ ಬಳಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ ₹50 ಸಾವಿರ ಗೂಗಲ್ ಪೇ ಮೂಲಕ ಪಾವತಿಸಲಾಗಿತ್ತು. ಉಳಿದ ₹50 ಸಾವಿರಕ್ಕೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಲೋಕೇಶ್ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು. ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಅವರು ಮಂಜುನಾಥ್ ಅಮಾನತಿಗೆ ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *