Breaking News

ಪಾವಗಡದಲ್ಲಿ ನಕ್ಸಲ್ ಹೆಸರಲ್ಲಿ ಬೆದರಿಕೆ, ನಾಡಬಾಂಬ್ ಸ್ಫೋಟ: ‘ಉಪ್ಪಾರ ವೆಂಕಟೇಶ’ನ ಸೆರೆಗೆ 120 ಪೊಲೀಸರಿಂದ ತಲಾಶ್!

ತುಮಕೂರು: ಪಾವಗಡ ತಾಲೂಕಿನ ಕನಿಕಲಬಂಡೆ ಹಾಗೂ ಸುತ್ತಮುತ್ತಲಿನ ಬೆಟ್ಟಗುಡ್ಡಗಳಲ್ಲಿ ಶಂಕಿತ ನಕ್ಸಲ್ ನಾಯಕ ಉಪ್ಪಾರ ವೆಂಕಟೇಶ್‌ಗಾಗಿ ಪೊಲೀಸರು ಬೃಹತ್ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ. ರೈತರ ಜಮೀನಿನ ಗೇಟ್‌ಗೆ ನಕ್ಸಲ್ ಸಂಘಟನೆ ಹೆಸರಿನಲ್ಲಿ ಪತ್ರ ಅಂಟಿಸಿ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಘಟನೆ ಬಳಿಕ ಕಾರ್ಯಾಚರಣೆ ಆರಂಭಿಸಲಾಗಿದೆ. ತುಮಕೂರು ಹೆಚ್ಚುವರಿ ಎಸ್ಪಿ ಗೋಪಾಲ್ ಹಾಗೂ ಮಧುಗಿರಿ ಡಿವೈಎಸ್‌ಪಿ ಮಂಜುನಾಥ್ ನೇತೃತ್ವದಲ್ಲಿ ಐದು ವಿಶೇಷ ತಂಡಗಳ 120ಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಎಕೆ-47 ಸೇರಿದಂತೆ ಶಸ್ತ್ರಾಸ್ತ್ರಗಳೊಂದಿಗೆ 12 ಕಿ.ಮೀ. ವ್ಯಾಪ್ತಿಯಲ್ಲಿ ಶೋಧ ನಡೆಸಲಾಗಿದ್ದು, ಡ್ರೋನ್ ಕ್ಯಾಮರಾ ಮೂಲಕವೂ ಕಾರ್ಯಾಚರಣೆ ಮುಂದುವರಿಸಲಾಗಿದೆ. ಕನಿಕಲಬಂಡೆ, ಪಳವಳ್ಳಿ ಕಡಪಲಕೆರೆ, ವೀರಮ್ಮನಹಳ್ಳಿ, ಗಂಗಾಸಾಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೋಧ ನಡೆಸಿದರೂ ಶಂಕಿತ ನಕ್ಸಲ್‌ನ ಯಾವುದೇ ಸುಳಿವು ಪತ್ತೆಯಾಗಿಲ್ಲ. ಪತ್ರ ಅಂಟಿಸಿದವರು ಯಾರು ಎಂಬುದೂ ಇನ್ನೂ ತಿಳಿದುಬಂದಿಲ್ಲ. ಕಾರ್ಯಾಚರಣೆ ಮುಂದುವರಿದಿದ್ದು, ವಿಶೇಷ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿವೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *