ಬೆಂಗಳೂರು: ಟಿ. ದಾಸರಹಳ್ಳಿ ವ್ಯಾಪ್ತಿಯಲ್ಲಿ 8ನೇ ತರಗತಿ ಓದುತ್ತಿದ್ದ 14 ವರ್ಷದ ವಿದ್ಯಾರ್ಥಿಗೆ ಬೆದರಿಕೆ ಹಾಕಿ ₹6 ಲಕ್ಷ ನಗದು ಹಾಗೂ ಸುಮಾರು 150 ಗ್ರಾಂ ಚಿನ್ನಾಭರಣ ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕಾಶ್, ಸಾಗರ್, ತರುಣ್, ವೀರೇಶ್, ಶಂಕರ್, ದಿಗಂತ್, ಲಿಖಿತ್, ಪ್ರಜ್ವಲ್, ನಾಗರಾಜು ಮತ್ತು ಪ್ರಶಾಂತ್ ಆರೋಪಿಗಳೆಂದು ತಿಳಿದುಬಂದಿದೆ. ಕೆಲ ದಿನಗಳಿಂದ ಬಾಲಕನೊಂದಿಗೆ ಸ್ನೇಹ ಬೆಳೆಸಿದ್ದ ಆರೋಪಿಗಳು, ಎಲೆಕ್ಟ್ರಿಕ್ ಬೈಕ್ ಹಾಳು ಮಾಡಿದ್ದಾನೆಂದು ಆರೋಪಿಸಿ ಬೆದರಿಕೆ ಹಾಕಿ ಮನೆಯಲ್ಲಿದ್ದ ಹಣ ಹಾಗೂ ಚಿನ್ನ ತರುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಬೆದರಿಕೆಗೆ ಹೆದರಿದ ಬಾಲಕ ಹಣ ಮತ್ತು ಆಭರಣಗಳನ್ನು ಆರೋಪಿಗಳಿಗೆ ನೀಡಿದ್ದಾನೆ. ಬಳಿಕ ಮನೆಯಲ್ಲಿ ನಗದು ಹಾಗೂ ಚಿನ್ನ ಕಾಣೆಯಾಗಿರುವುದು ಕುಟುಂಬದ ಗಮನಕ್ಕೆ ಬಂದಿದ್ದು, ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

