Breaking News

ಟಿ.ನರಸೀಪುರ ಇನ್ಸ್‌ಪೆಕ್ಟರ್ ಧನಂಜಯನ ಒಂದೊಂದೇ ಅವತಾರ ಬೆಳಕಿಗೆ, ವಿವಾಹಿತನಾಗಿದ್ರು ದೆಹಲಿ ಯುವತಿ ಜೊತೆ ಡಿಂಗ್‌ಡಾಂ!

ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆ ಕುರಿತು ಇನ್‌ಸ್ಪೆಕ್ಟರ್ ಧನಂಜಯ ನೀಡಿದ್ದ ವಿವಾದಾತ್ಮಕ ಹೇಳಿಕೆ ರಾಜಕೀಯ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಅವರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯಿಸುತ್ತಿರುವ ಬೆನ್ನಲ್ಲೇ, ಅವರ ವಿರುದ್ಧದ ಹಳೆಯ ಆರೋಪಗಳು ಮತ್ತೆ ಚರ್ಚೆಗೆ ಬಂದಿವೆ. 2012ರಲ್ಲಿ ಬೆಂಗಳೂರಿನಲ್ಲಿ ತನಿಖೆ ನಡೆಸುತ್ತಿದ್ದ ವೇಳೆ ದೆಹಲಿ ಮೂಲದ ಯುವತಿಗೆ ವಿವಾಹದ ವಿಚಾರ ಮುಚ್ಚಿಟ್ಟು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಧನಂಜಯ ವಿರುದ್ಧ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. 2014ರಲ್ಲಿ ಅವರನ್ನು ಬಂಧಿಸಲು ದೆಹಲಿ ಪೊಲೀಸರು ಬಂದಾಗ ಎಂಟು ದಿನಗಳ ಕಾಲ ನಾಪತ್ತೆಯಾಗಿದ್ದರು ಎಂಬ ಆರೋಪವೂ ಇದೆ. ಕಳೆದ ವರ್ಷ ನಾಲ್ವರು ದಲಿತ ಯುವಕರನ್ನು ಠಾಣೆಗೆ ಕರೆಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೂ ಅವರ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಸಿಎಂಗೆ ದೂರು ನೀಡಲಾಗಿದ್ದು, ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತ್ತು ಎನ್ನಲಾಗಿದೆ. ಇದೀಗ ಹಳೆಯ ಆರೋಪಗಳ ಕುರಿತು ಸಮಗ್ರ ತನಿಖೆಗೆ ಆಗ್ರಹ ಕೇಳಿಬಂದಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *