ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ ತನ್ನ ಚಿಕ್ಕಪ್ಪನಿಗೆ ಚಾಕು ಇರಿದಿದ್ದಾನೆ. ಶ್ರೀನಿವಾಸ್ (52) ಗಾಯಗೊಂಡಿದ್ದು, ಅವರ ಸೋದರ ಸಂಬಂಧಿ ಮಂಜುನಾಥ್ ವಿರುದ್ಧ ಆರೋಪ ಕೇಳಿಬಂದಿದೆ. ರಾಜಪ್ಪ ಹಾಗೂ ಶ್ರೀನಿವಾಸ್ ಕುಟುಂಬಗಳ ನಡುವೆ ಕೆಲ ದಿನಗಳಿಂದ ವಿವಾದವಿತ್ತು. ಇದೇ ವಿಚಾರವಾಗಿ ಗಲಾಟೆ ನಡೆದ ವೇಳೆ ಕಾರಿನಲ್ಲಿ ಬಂದ ಮಂಜುನಾಥ್ ಚಾಕುವಿನಿಂದ ಶ್ರೀನಿವಾಸ್ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಬಿಡಿಸಲು ಬಂದ ಶ್ರೀನಿವಾಸ್ ಪತ್ನಿ ಶಶಿಕಲಾ ಮೇಲೂ ಹಲ್ಲೆ ನಡೆದಿದೆ. ಚಾಕು ಇರಿತದಿಂದ ಶ್ರೀನಿವಾಸ್ ಎದೆ, ಪಕ್ಕೆಲುಬು ಹಾಗೂ ತೊಡೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
