Breaking News

ಬೆಂಗಳೂರಲ್ಲಿ ಗಲ್ಲಿ ಗಲ್ಲಿಗೂ ರೌಡಿಗಳು! ಸಣ್ಣ ಅಂಗಡಿ ಇಟ್ಕೊಂಡು ಜೀವನ ಮಾಡೋಣಂದ್ರೂ ಪುಂಡರ ಕಾಟ!

ಬೆಂಗಳೂರು: ಎಗ್‌ರೈಸ್ ಖಾಲಿಯಾಗಿದೆ ಎಂದಿದ್ದಕ್ಕೆ ಪಾನಮತ್ತ ಗ್ಯಾಂಗ್ ವ್ಯಕ್ತಿಯೊಬ್ಬರ ಮೇಲೆ ತಲ್ವಾರ್‌ನಿಂದ ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಬೇಗಿಹಳ್ಳಿಯಲ್ಲಿ ನಡೆದಿದೆ. ರೌಡಿ ಕನಕರಾಜು ಹಾಗೂ ಆತನ ಗ್ಯಾಂಗ್ ರಾತ್ರಿ ಎಗ್‌ರೈಸ್ ತಿನ್ನಲು ಬಂದಿದ್ದು, ಅಂಗಡಿ ಮುಚ್ಚುತ್ತಿದ್ದ ಮಾಲೀಕ ಎಗ್‌ರೈಸ್ ಖಾಲಿಯಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಕಿರಿಕ್ ಮಾಡಿದ ಆರೋಪಿಗಳು, ಪಕ್ಕದ ಅಂಗಡಿಗೆ ಪೇಂಟಿಂಗ್ ಮಾಡುತ್ತಿದ್ದ ಮಂಜುನಾಥ್ ಎಂಬುವವರ ಮೇಲೆ ತಲ್ವಾರ್‌ನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಮಂಜುನಾಥ್ ಅವರ ಕೈಗೆ ಗಂಭೀರ ಗಾಯವಾಗಿದೆ. ಈ ಕುರಿತು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಸಿಸಿಟಿವಿ ಹಾಗೂ ಮೊಬೈಲ್ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *