ವಿಜಯನಗರ: ಕೆಕೆಆರ್ಟಿಸಿ ಬಸ್ ಹರಿದು 8 ಕುರಿಗಳು ಸಾವನ್ನಪ್ಪಿ, 2 ಕುರಿಗಳಿಗೆ ಗಂಭೀರ ಗಾಯಗಳಾದ ಘಟನೆ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ. ಹರಿಜನ ಗಾಳೆಪ್ಪ ಅವರಿಗೆ ಸೇರಿದ ಕುರಿಗಳಾಗಿದ್ದು, ಎಮ್ಮಿಗನೂರಿನಿಂದ ಹಗರಿಬೊಮ್ಮನಹಳ್ಳಿಗೆ ಬಸ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಸ್ ಹಗರಿಬೊಮ್ಮನಹಳ್ಳಿ ಡಿಪೋಗೆ ಸೇರಿದೆ. ಘಟನೆ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

