ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್ಕುಮಾರ್ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್ಐಟಿ ತನಿಖೆಯಿಂದ ತಿಳಿದುಬಂದಿದೆ. ಕಡಿಮೆ ಬೆಲೆಗೆ ಔಷಧ ಪಡೆದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ. ಎಸ್ಐಟಿ ದಾಳಿಯಲ್ಲಿ ಕೃಪಾ ಫಾರ್ಮಸಿಯಲ್ಲಿ ಅಪಾರ ಪ್ರಮಾಣದ ನಕಲಿ ಔಷಧಿಗಳು ಹಾಗೂ ಬಿಲ್ಗಳು ಪತ್ತೆಯಾಗಿದ್ದು, ಮಾಲೀಕ ವೀರೇಶ್ಕುಮಾರ್ನನ್ನು ಬಂಧಿಸಲಾಗಿದೆ. ಆತನ ಮಾಹಿತಿ ಆಧರಿಸಿ ಮತ್ತಷ್ಟು ದಾಳಿ ನಡೆಯುವ ಸಾಧ್ಯತೆಯಿದೆ. ಮತ್ತೊಬ್ಬ ಆರೋಪಿ ಪ್ರಶಾಂತ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಆತನನ್ನು ಭಾರತಕ್ಕೆ ಕರೆತರಲು ಎಸ್ಐಟಿ ಪ್ರಯತ್ನಿಸುತ್ತಿದೆ. ಈ ಹಿಂದೆ ಸಿ.ಕೆ.ಪಾಳ್ಯದ ತೋಟದ ಮನೆಯಲ್ಲಿ ₹5 ಕೋಟಿ ಮೌಲ್ಯದ ನಕಲಿ ಔಷಧಿ ಪತ್ತೆಯಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

