ಚಿತ್ರದುರ್ಗ: ಶ್ರೀಕೃಷ್ಣ ಜಯಂತಿ ಹಿನ್ನೆಲೆಯಲ್ಲಿ ಡಿಜೆ ಬಳಸಲು ಅವಕಾಶ ನೀಡುವಂತೆ ಆಗ್ರಹಿಸಿ ಸೆ.12ರಂದು ಹಿರಿಯೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ-48 ತಡೆದು ಯುವಕರು ಪ್ರತಿಭಟನೆ ನಡೆಸಿದ್ದರು. ಹೆಚ್ಚುವರಿ ಸೌಂಡ್ ಬಳಸಿ ಮೆರವಣಿಗೆ ನಡೆಸಿದ ಆರೋಪದಡಿ ಹಿರಿಯೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

