Breaking News

ಧಾರವಾಡದಲ್ಲಿ ವಿಚ್ಛೇದನ ವಿಚಾರಣೆ ಮುಗಿಸಿ ಹಿಂತಿರುಗುತ್ತಿದ್ದ ಪತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ!

ಧಾರವಾಡದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದ್ದು, ನ್ಯಾಯಾಲಯದ ವಿಚಾರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಪತಿಯ ಮೇಲೆ ಸುಮಾರು 6 ಮಂದಿಯ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ಎಸ್‌ಬಿಐ ಮುಖ್ಯ ಶಾಖೆ ಸಮೀಪ ಘಟನೆ ನಡೆದಿದ್ದು, ಶಶಿಧರ್ ಶಿರಾಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಯಲ್ಲಿ ಶಶಿಧರ್ ಅವರ ತಲೆ, ಕೈ ಹಾಗೂ ಖಾಸಗಿ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಮೊದಲು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ರವಾನಿಸಲಾಗಿದೆ. ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಶಶಿಧರ್ ಡಿವೋರ್ಸ್ ನೀಡಲು ನಿರಾಕರಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪತ್ನಿಯ ಕಡೆಯವರೇ ಹಲ್ಲೆ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *