Breaking News

ಗೃಹ ಸಚಿವರ ತವರಲ್ಲೇ ಪೊಲೀಸ್ ಇನ್ಸ್‌ಪೆಕ್ಟರ್ ಕಾರಿಗೆ ಬೆಂಕಿ ಹಚ್ಚಿದ ಕಾನ್‌ಸ್ಟೇಬಲ್!

ಕಲಬುರಗಿ ಜಿಲ್ಲೆಯ ಮಹಾಗಾಂವ್ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಚಿತಕೋಟೆ ಅವರ ವೈಯಕ್ತಿಕ ಕಾರಿಗೆ ಕಾನ್ಸ್ಟೇಬಲ್ ರಾಜಶೇಖರ ವರನಾಳ್ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಕಾನ್ಸ್ಟೇಬಲ್ ವಿರುದ್ಧ ದೂರು ನೀಡಿದ್ದಕ್ಕೆ ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಜಶೇಖರ ವರನಾಳ್ ನಾಲ್ಕು ವರ್ಷ ಮಹಾಗಾಂವ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇತ್ತೀಚೆಗೆ ಚಿಂಚೋಳಿ ಠಾಣೆಗೆ ವರ್ಗಾವಣೆಯಾಗಿದ್ದ. ತನ್ನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಸಿಟ್ಟಾಗಿ PSI ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿದ್ದವರು ತಕ್ಷಣ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದ್ದು, ಕಾರಿಗೆ ಅಲ್ಪ ಹಾನಿಯಾಗಿದೆ. ಘಟನೆ ಸಂಬಂಧ PSI ಬಸವರಾಜ್ ಚಿತಕೋಟೆ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *