ಬೆಂಗಳೂರು ಅಗ್ರಹಾರ ದಾಸರಹಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ 21 ವರ್ಷದ ಪೂಜಾ ಎಂಬ ಯುವತಿಯನ್ನು ಕುಟುಂಬದವರು ಸುಪಾರಿ ನೀಡಿ ಅಪಹರಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಮನೆಗೆ ನುಗ್ಗಿದ ಆರೋಪಿಗಳು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಮುಂದಾಗಿದ್ದಾರೆ. ಸ್ಥಳೀಯರು ತಡೆಯಲು ಬಂದಾಗ ಆರೋಪಿಗಳು ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ 35ಕ್ಕೂ ಹೆಚ್ಚು ವಾಹನಗಳು ಹಾಗೂ 100ಕ್ಕೂ ಹೆಚ್ಚು ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಹಳ್ಳಿ ಬಳಿ ಸ್ಥಳೀಯರು ಕಾರನ್ನು ಅಡ್ಡಗಟ್ಟಿ ಪೂಜಾಳನ್ನು ರಕ್ಷಿಸಿ, ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಜಸ್ಥಾನ ಮೂಲದ ರಾಕೇಶ್, ಕರಣ್ ಹಾಗೂ ಆಯನ್ ವಶದಲ್ಲಿದ್ದು, ಕಾರು ಚಾಲಕ ಸದ್ದಾಂ ಸೇರಿದಂತೆ ಮತ್ತೊಬ್ಬ ಆರೋಪಿಗಾಗಿ ಶೋಧ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

