ಕಲಬುರಗಿ ಜಿಲ್ಲೆಯ ಮಹಾಗಾಂವ್ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ರಾಜಶೇಖರ್ ವರನಾಳ್ ಎಂಬುವವರು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಆಕೆಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪಿಎಸ್ಐ ಬಸವರಾಜ್ ಎಫ್ಐಆರ್ ದಾಖಲಿಸಿದ್ದರು. ಇದರಿಂದ ಸಿಟ್ಟಿಗೆದ್ದ ರಾಜಶೇಖರ್, ಪಿಎಸ್ಐ ಬಸವರಾಜ್ ಅವರ ಖಾಸಗಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಸ್ಥಳೀಯರು ತಕ್ಷಣ ಬೆಂಕಿ ನಂದಿಸಿದ್ದು, ದೊಡ್ಡ ಅನಾಹುತ ತಪ್ಪಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಸ್ಟೇಬಲ್ ವಿರುದ್ಧ ಎರಡು ಎಫ್ಐಆರ್ ದಾಖಲಾಗಿವೆ. ಘಟನೆ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ತಪ್ಪು ಮಾಡಿದವರು ಕಾನ್ಸ್ಟೇಬಲ್ ಆಗಿರಲಿ ಅಥವಾ ಐಪಿಎಸ್ ಅಧಿಕಾರಿಯಾಗಿರಲಿ, ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕರಣದ ಕುರಿತು ವರದಿ ಕೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

