ಮೈಸೂರು, ಸೆ.17: ಟಿ.ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ಅವರ ವಿವಾದಿತ ಹೇಳಿಕೆಯ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್ ಮಂಜು ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಆದರೆ, ತಮ್ಮನ್ನು ಠಾಣೆಗೆ ಕರೆಸಿ ಗಣಪತಿ ವಿಸರ್ಜನೆ ಸಂಬಂಧದ ಚರ್ಚೆಗಳನ್ನು ಚಿತ್ರೀಕರಿಸಲು ಸೂಚಿಸಿದ್ದೇ ಇನ್ಸ್ಪೆಕ್ಟರ್ ಧನಂಜಯ್ ಎಂದು ಮಂಜು ಆರೋಪಿಸಿದ್ದಾರೆ. ಕಾನ್ಸ್ಟೇಬಲ್ ಯಶ್ವಂತ್ ಮೂಲಕ ತಮ್ಮನ್ನು ಕರೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ವಿಡಿಯೋ ಅಪ್ಲೋಡ್ ಮಾಡುವಾಗ ಇನ್ಸ್ಪೆಕ್ಟರ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಇದೀಗ ಅದೇ ವಿಡಿಯೋದಿಂದ ಅಶಾಂತಿ ಸೃಷ್ಟಿಯಾಗಿದೆ ಎಂದು ದೂರು ನೀಡಿರುವುದು ತಪ್ಪನ್ನು ಮುಚ್ಚಿಹಾಕುವ ಪ್ರಯತ್ನ ಎಂದು ಮಂಜು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
