Breaking News

ಮನೆಯವರ ವಿರೋಧದ ನಡುವೆ ಪ್ರೇಮವಿವಾಹವಾಗಿ ಬೆಂಗಳೂರಲ್ಲಿ ನೆಲೆಸಿದ್ದ ಯುವತಿಯ ಅಪಹರಣ: ಕರೆದೊಯ್ಯುವಾಗ ಅಪಘಾತ!

ಬೆಂಗಳೂರು: ಕುಟುಂಬದ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ರಾಜಸ್ಥಾನ ಮೂಲದ 21 ವರ್ಷದ ಪೂಜಾಳನ್ನು ಅಪಹರಿಸಲು ಯತ್ನಿಸಿದ ಘಟನೆ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ನಾಲ್ವರು ಆರೋಪಿಗಳು ಆಕೆಯನ್ನು ಕಾರಿನಲ್ಲಿ ಕರೆದೊಯ್ಯುವಾಗ ಸಾರ್ವಜನಿಕರು ಬೆನ್ನಟ್ಟಿದ್ದು, ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಕೇಶ್, ಕರಣ್ ಹಾಗೂ ಅಯಾನ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಸದ್ದಾಂ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂಜಾ ಒಂಬತ್ತು ತಿಂಗಳ ಹಿಂದೆ ಓಂ ಪ್ರಕಾಶ್ ಎಂಬ ಯುವಕನನ್ನು ಕುಟುಂಬದ ವಿರೋಧದ ನಡುವೆಯೇ ವಿವಾಹವಾಗಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ಅಪಹರಣಕ್ಕೆ ಯತ್ನ, ಅಪಘಾತಕ್ಕೆ ಕಾರಣವಾದ ಪರಿಸ್ಥಿತಿ ಸೇರಿದಂತೆ ಪ್ರಕರಣದ ಕುರಿತು ವಿಜಯನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಗಣೇಶೋತ್ಸವ ಮೆರವಣಿಗೆ ವೇಳೆ ಭಟ್ಕಳದಲ್ಲಿ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ: ಬಿಗಿ ಬಂದೋಬಸ್ತ್

ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ …

Leave a Reply

Your email address will not be published. Required fields are marked *