Breaking News

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ!

ಬೆಂಗಳೂರು: ಹಣಕ್ಕಾಗಿ 13 ವರ್ಷದ ಬಾಲಕನನ್ನು ಅಪಹರಿಸಿ, ಕೊಲೆ ಮಾಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ವಿನಾಯಕನಗರದ ಪ್ರಜ್ವಲ್ (13) ಮೃತ ಬಾಲಕ. ಪ್ರಕರಣಕ್ಕೆ ಸಂಬಂಧಿಸಿ ಆತನ ನೆರೆಮನೆಯ ಭಾಸ್ಕರ್ ರೆಡ್ಡಿಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಮೆರವಣಿಗೆಗೆ ಪಟಾಕಿ ತರಬೇಕೆಂದು ನಂಬಿಸಿ ಬಾಲಕನನ್ನು ಕಾರಿನಲ್ಲಿ ಕರೆದೊಯ್ದ ಆರೋಪಿ, ಪೋಷಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಬಾಲಕನಿಗೆ ಬೆದರಿಕೆ ವಿಡಿಯೋ ಮಾಡಿಸಿ ಕಳುಹಿಸಿ, ಹಾಲೋಬ್ರಿಕ್ಸ್ ಕಲ್ಲಿನಿಂದ ಹೊಡೆದು ಕಾರಿನಲ್ಲೇ ಕೊಲೆ ಮಾಡಿದ್ದಾನೆ. ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಆಂಧ್ರಪ್ರದೇಶದತ್ತ ಪರಾರಿಯಾಗುತ್ತಿದ್ದ ವೇಳೆ ಸರಣಿ ಅಪಘಾತಕ್ಕೀಡಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮತ್ತೋರ್ವ ಆರೋಪಿ ಏಳುಕುಂಡಲವಾಡಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *