ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮಸೀದಿ ಮುಂಭಾಗದಲ್ಲಿ ಮಾತನಾಡುವ ವೇಳೆ ಸ್ಥಳೀಯ ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಿಯ ಹೇಳಿಕೆಗಳನ್ನು ಖಂಡಿಸಿ ಏಕವಚನದಲ್ಲಿ ಸವಾಲು ಹಾಕಿದ್ದಾರೆ. ಭಾಷಣದ ವೇಳೆ, “ಇನ್ನೂ ಒಂದುವರೆ ವರ್ಷ ಬಿಟ್ಟು ನಾವೇ ಅಧಿಕಾರಕ್ಕೆ ಬರ್ತೀವಿ. ಆಗ ಈ ಧನಂಜಯನ ಲೆಕ್ಕ ಚುಕ್ತಾ ಮಾಡ್ತೀವಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗೆ ಬಹಿರಂಗವಾಗಿ ಬೆದರಿಕೆ ಹಾಕಿರುವ ಆರೋಪದ ಬಗ್ಗೆಯೂ ಚರ್ಚೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
