Breaking News

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಲು ಕಳ್ಳಾಟ: ಜೀವದ ಜೊತೆ ಚೆಲ್ಲಾಟ!

ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಹಣ ಉಳಿಸಲು ಕೆಲ ವಾಹನ ಚಾಲಕರು ನಿಯಮ ಉಲ್ಲಂಘಿಸಿ ರಾಂಗ್ ರೂಟ್‌ನಲ್ಲಿ ಸಂಚರಿಸುತ್ತಿರುವ ಆರೋಪ ಕೇಳಿಬಂದಿದೆ. ಇದರಿಂದ ಸವಾರರ ಜೀವಕ್ಕೆ ಅಪಾಯ ಎದುರಾಗಿದೆ. ಶ್ರೀರಂಗಪಟ್ಟಣ ಟೋಲ್ ತಪ್ಪಿಸಲು ಟ್ರಕ್, ಬಸ್ ಹಾಗೂ ಕಾರುಗಳು ಸರ್ವೀಸ್ ರಸ್ತೆಯಿಂದ ಬಂದು ಎಕ್ಸಿಟ್ ಭಾಗದಲ್ಲೇ ರಿವರ್ಸ್ ಎಂಟ್ರಿ ಪಡೆಯುತ್ತಿವೆ. ಎಂಟ್ರಿಯಲ್ಲಿ ಎಕ್ಸಿಟ್, ಎಕ್ಸಿಟ್‌ನಲ್ಲಿ ಎಂಟ್ರಿ ಪಡೆಯುತ್ತಿರುವುದರಿಂದ ಅಪಘಾತದ ಆತಂಕ ಹೆಚ್ಚಾಗಿದೆ. ಈ ಹಿಂದೆ ಮಂಡ್ಯ ಸಮೀಪ ವೇಗವಾಗಿ ಬಂದ ಕಾರೊಂದು ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟಿದ್ದರು. ಹಲವು ದೂರುಗಳಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಬೆಳಗಾವಿ ದಮೋನೆ ಫ್ಯಾಮಿಲಿ ದುರಂತದ ಟ್ವಿಸ್ಟ್: 6 ಜನರ ಸಾವಿಗೆ ಫ್ರಿಡ್ಜ್ ಬ್ಲಾಸ್ಟ್ ಕಾರಣವಲ್ಲ, CCTV ವಿಡಿಯೋ ಸಂದೇಹ!

ಬೆಳಗಾವಿ: ಚವಾಟ್‌ಗಲ್ಲಿಯಲ್ಲಿ ಸೆ.16ರಂದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಘಟನೆಗೂ …

Leave a Reply

Your email address will not be published. Required fields are marked *