ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಟೋಲ್ ಹಣ ಉಳಿಸಲು ಕೆಲ ವಾಹನ ಚಾಲಕರು ನಿಯಮ ಉಲ್ಲಂಘಿಸಿ ರಾಂಗ್ ರೂಟ್ನಲ್ಲಿ ಸಂಚರಿಸುತ್ತಿರುವ ಆರೋಪ ಕೇಳಿಬಂದಿದೆ. ಇದರಿಂದ ಸವಾರರ ಜೀವಕ್ಕೆ ಅಪಾಯ ಎದುರಾಗಿದೆ. ಶ್ರೀರಂಗಪಟ್ಟಣ ಟೋಲ್ ತಪ್ಪಿಸಲು ಟ್ರಕ್, ಬಸ್ ಹಾಗೂ ಕಾರುಗಳು ಸರ್ವೀಸ್ ರಸ್ತೆಯಿಂದ ಬಂದು ಎಕ್ಸಿಟ್ ಭಾಗದಲ್ಲೇ ರಿವರ್ಸ್ ಎಂಟ್ರಿ ಪಡೆಯುತ್ತಿವೆ. ಎಂಟ್ರಿಯಲ್ಲಿ ಎಕ್ಸಿಟ್, ಎಕ್ಸಿಟ್ನಲ್ಲಿ ಎಂಟ್ರಿ ಪಡೆಯುತ್ತಿರುವುದರಿಂದ ಅಪಘಾತದ ಆತಂಕ ಹೆಚ್ಚಾಗಿದೆ. ಈ ಹಿಂದೆ ಮಂಡ್ಯ ಸಮೀಪ ವೇಗವಾಗಿ ಬಂದ ಕಾರೊಂದು ಫ್ಲೈಓವರ್ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟಿದ್ದರು. ಹಲವು ದೂರುಗಳಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

