ಬೆಂಗಳೂರು: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಹಳ್ಳಿ ಗೇಟ್ ಬಳಿ ಸುಟ್ಟ ಸ್ಥಿತಿಯಲ್ಲಿ ಕೆಎಸ್ಆರ್ಪಿ ಕಾನ್ಸ್ಟೇಬಲ್ ಶವ ಪತ್ತೆಯಾಗಿದೆ. ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ಕುಮಾರ್ (35) ಎಂದು ಗುರುತಿಸಲಾಗಿದೆ. ನವೀನ್ ಬೈಕ್ನಲ್ಲಿ ಡಿ.ಶೆಟ್ಟಹಳ್ಳಿಗೆ ಬಂದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ನಂದಗುಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
