Breaking News

ಮದ್ಯ ಪ್ರೀಯರಿಗೆ ಮತದಾನದಿಂದ ಬಾರಿ ಆಫರ್

ಹುಬ್ಬಳ್ಳಿ: ಜಿಲ್ಲೆಗಳಲ್ಲಿ ಹೇಗಾದರೂ ಮಾಡಿ ಈ ಬಾರಿ‌ ಮತದಾನ ಪ್ರಮಾಣ ಹೆಚ್ಚಿಸಲೇಬೇಕೆಂದು ಧಾರವಾಡ ಜಿಲ್ಲಾಡಳಿತಗಳು ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿವೆ. ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಮತದಾರ ಪ್ರಭುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾಡಳಿತ ಈ ಕ್ರಮಕ್ಕೆ ಈಗಾಗಲೇ ಸಾರ್ವಜನಿಕರಿಂದ ಮೆಚ್ಚುಗೆ ಕೂಡಾ ವ್ಯಕ್ತವಾಗತ್ತಿವೆ. ಇದರ ಮಧ್ಯ ಈಗ ನಗರದ ಕರ್ನಾಟಕ ವೈನ್ ಸ್ಟೊರ್ ಮಾಲೀಕರೊಬ್ಬರು ಜಿಲ್ಲಾಡಳಿಕ್ಕೆ ಸಾಥ್ ನೀಡುವ ಮೂಲಕ ಮಧ್ಯ ಪ್ರಿಯರು ಮತದಾನದಲ್ಲಿ ಭಾಗವಹಿಸುವಂತೆ ಮಾಡುತ್ತಿದ್ದಾರೆ.ಮತದಾನ ಮಾಡಿ ಬಂದ ಮದ್ಯ ಪ್ರಿಯರಿಗೆ ಬಂಪರ್ ಆಫರ್ ನೀಡುತ್ತಿದ್ದಾರೆ. ನಾಳೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಮತದಾನ ಮಾಡಿದ ಶಾಹಿ ಗುರುತು ತೋರಿಸಿದರೆ 3% ಡಿಸ್ಕೌಂಟ್ ಕೂಡ ನೀಡಲಾಗುತ್ತದೆ. ಇದು ಹಲವಾರು ಮದ್ಯ ಪ್ರೀಯ ಮತದಾರರಲ್ಲಿ ಮತದಾನದ ಜಾಗೃತಿ ಅರಿವನ್ನು ಮೂಡಿಸುವ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸುವ ವಿನೂತನ ಪ್ರಯೋಗವಾಗಿದೆ. ಧಾರವಾಡ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಜಾರಿಯಲ್ಲಿರುವ ವಿಭಿನ್ನ ಮತದಾನ ಜಾಗೃತಿ ಅಭಿಯಾನ ಎಂದು ಕೂಡ ಕರೆಯಬಹುದಾಗಿದೆ. ರಾಜಕೀಯ ಪಕ್ಷಗಳು ನೀಡುವ ಮದ್ಯದ ಆಮಿಷಕ್ಕೆ ಬಲಿಯಾಗಿ ಮತವನ್ನು ಮಾರಿಕೊಳ್ಳಬಾರದು ಮದ್ಯ ಪ್ರೀಯರು ಪ್ರಮಾಣಿಕವಾಗಿ ತಮ್ಮ ಹಕ್ಕನ್ನು ಚಲಾಯಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಈ ಮತದಾನದ ಅಭಿಯಾನ ಜಾರಿ ಮಾಡಲಾಗಿದೆ ಎಂದು ವೈನ್ ಸ್ಟೋರ ಮಾಲೀಕರು ಹೇಳಿದ್ದಾರೆ. ಒಟ್ಟಿನಲ್ಲಿ ಜಿಲ್ಲಾಡಳಿತದ ಪ್ರಯತ್ನಕ್ಕೆ ಕೈ ಜೋಡಿಸಿರುವ ವೈನ್ ಸ್ಟೋರ್ ಮದ್ಯ ಪ್ರೀಯರ ಮತದಾನಕ್ಕೆ ಹೆಚ್ಚು ಒತ್ತು ನೀಡಿರುವುದು ಶ್ಲಾಘನೀಯವಾಗಿದೆ.

Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *