Breaking News

ಸಿ.ಎಸ್​.ಶಿವಳ್ಳಿ ಸಾವಿಗೆ ದೋಸ್ತಿ ಸರ್ಕಾರದ ಕಿರುಕುಳವೇ ಕಾರಣ: ಶ್ರೀರಾಮುಲು

ಹುಬ್ಬಳ್ಳಿ: ಸಿ.ಎಸ್​.ಶಿವಳ್ಳಿ ಸಾವಿಗೆ ಕಾಂಗ್ರೆಸ್-ಜೆಡಿಎಸ್​ ನೇತೃತ್ವದ ಮೈತ್ರಿ ಸರ್ಕಾರವೇ ಕಾರಣ ಅಂತಾ ಶಾಸಕ ಶ್ರೀರಾಮುಲು ಆರೋಪಿಸಿದ್ದಾರೆ. ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ಪರ ಬೆಟದೂರು ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಶಾಸಕ, ಸಿಎಸ್​ ಶಿವಳ್ಳಿ ಮೈತ್ರಿ ಸರ್ಕಾರದ ಕಿರುಕುಳದಿಂದಲೇ ಮೃತಪಟ್ಟಿದ್ದಾರೆ. ಹೀಗಾಗಿ ಕುಂದಗೋಳ ಜನರಿಗೆ ಸೆಡು ತೀರಿಸಿಕೊಳ್ಳುವ ಸಮಯ ಬಂದಿದೆ ಎಂದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ದೊಡ್ಡ ಮನುಷ್ಯ, ಮತ್ತೊಮ್ಮೆ ಸಿಎಂ ಆಗಬೇಕು. ಬಹಳ ವರ್ಷಗಳಿಂದ ಹೋರಾಟ ಮಾಡಿದ್ದಾರೆ. ನಮ್ಮ ಜೀವ ಹೋಗ್ಲಿ, ಆದರೆ ಬಿಎಸ್​ವೈ ಸಿಎಂ ಆಗಬೇಕು. ನಮಗೆ ಯಾವುದೇ ಅಧಿಕಾರದ ಆಸೆ ಇಲ್ಲ. ಮುಂದೆ ಬಿಎಸ್ ಯಡಿಯೂರಪ್ಪಗೆ ವಯಸ್ಸು ಸಹಕರಿಸಲ್ಲ. ಈ ಬಾರಿಯೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು. ನಾಟಕ ಆಡೋದು ಯಡಿಯೂರಪ್ಪಗೆ ಗೊತ್ತಿಲ್ಲ. ಏನೋ ಸ್ವಲ್ಪವೇ ಸಿಡುಕು ಸ್ವಭಾವವಿದೆ ಅಷ್ಟೇ ಎಂದರು.

Share News

About admin

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *